Sunday 26 February 2012

ಮುದ್ರಾಡಿ ರಾಷ್ಟ್ರೀಯ ರಂಗ ಉತ್ಸವಕ್ಕೆ ಚಾಲನೆ

mudradi ranga utsava






ತುಳು ರಾಜ್ಯ ಭಾಷೆಯಾಗಲಿ:ಅಗ್ರಹಾರ ಕೃಷ್ಣಮೂರ್ತಿ
ಹೆಬ್ರಿ, ಫೆ.26: ತುಳುನಾಡಿನ ಸಂಸ್ಕೃತಿ, ಭಾಷೆ ವಿಶಿಷ್ಟ ಮತ್ತು ಐತಿಹಾಸಿಕ. ಮೊದಲು ತುಳು ಭಾಷೆಯನ್ನು ರಾಜ್ಯ ಭಾಷೆಯಾನ್ನಾಗಿ ರಾಜ್ಯ ಸರಕಾರ ಅಂಗೀಕಾರ ಪಡೆಯಬೇಕು. ಮುಂದೆ ದೇಶದ 8ನೇ ಪರೀಚ್ಛೇದಕ್ಕೆ ಸೇರಿಸುವ ಹೋರಾಟಕ್ಕೆ ಬಲ ಬರುತ್ತದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿ ಅಗ್ರಹಾರ ಕೃಷ್ಣಮೂರ್ತಿ ಹೇಳಿದ್ದಾರೆ.ಮುದ್ರಾಡಿ ನಮ ತುಳುವೆರ್ ಕಲಾಸಂಘಟನೆಯ ಆಶ್ರಯದಲ್ಲಿ ಮುದ್ರಾಡಿ ಯ ದಿವ್ಯಸಾಗರ ಬಯಲು ರಂಗಸ್ಥಳದಲ್ಲಿ ಶನಿವಾರ ಆಯೋಜಿಸಲಾದ ಮುದ್ರಾಡಿ ರಾಷ್ಟ್ರೀಯ ರಂಗ ಉತ್ಸವದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.ಚೆಂಡೆ ಬಾರಿಸುವ ಮೂಲಕ ಉತ್ಸವವನ್ನು ಉದ್ಘಾಟಿಸಿದ ನಟ, ಸಿನೆಮಾ ನಿರ್ದೇಶಕ ಬಿ.ಸುರೇಶ್ ಮಾತನಾಡಿ, ನಮಗೆ ಬೇಕಾದ ಆನಂದ ನಮಗೆ ನಾವೇ ತಂದುಕೊಂಡು ಸಂತೋಷ ಪಡುವುದು ಬಹುಮುಖ್ಯ. ರಾಜ್ಯ ಸರಕಾರ ರಂಗ ಉತ್ಸವಕ್ಕೆ ಅನುದಾನ ನೀಡಿಲ್ಲ ಎನ್ನುವುದು ಮುಖ್ಯವಲ್ಲ. ಇಷ್ಟು ಜನರ ಪೋತ್ಸಾಹ ದೊರೆತಿರುವುದು ವಿಶೇಷ ಎಂದು ಹೇಳಿದರು.ಕಾರ್ಕಳ ಶಾಸಕ ಗೋಪಾಲ ಭಂಡಾರಿ, ಮುಂಬೈ ಉದ್ಯಮಿ ಮುದ್ರಾಡಿ ದಿವಾಕರ ಶೆಟ್ಟಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅಂಬಾತನಯ ಮುದ್ರಾಡಿ, ಬೆಂಗಳೂರಿನ ಪೊಲೀಸ್ ಅಧಿಕಾರಿ ಕಬ್ಬಿನಾಲೆ ಪ್ರಭಾಕರ ಬಾಯರಿ ಮಾತನಾಡಿದರು. ಈ ಸಂದರ್ಭದಲ್ಲಿ ಮುಂಬೈ ಕರ್ನಾಟಕ ಸಂಘದ ಕಾರ್ಯದರ್ಶಿ ಡಾ.ಭರತ್ ಕುಮಾರ್ ಪೊಲಿಪುರನ್ನ್ನು ಸನ್ಮಾನಿಸಲಾಯಿತು.ಜಿಪಂ ಸದಸ್ಯ ಮಂಜುನಾಥ ಪೂಜಾರಿ, ನಮತುಳುವೆರ್ ಕಲಾ ಸಂಘಟನೆ ಯ ಅಧ್ಯಕ್ಷ ಸುಕುಮಾರ್ ಮೋಹನ್, ಧರ್ಮಯೋಗಿ ಮೋಹನ್, ಸುಧೀಂದ್ರ ಮೋಹನ್, ಸುರೇಂದ್ರ ಮೋಹನ್, ಸುಗಂಧಿ ಮೋಹನ್, ರಂಗಕರ್ಮಿ ಜಗದೀಶ ಜಾಲ, ಜಯ ಪ್ರಕಾಶ ಮಾವಿನಕುಳಿ ಮೊದಲಾದವರು ಉಪಸ್ಥಿತ ರಿದ್ದರು. ಬಳಿಕ ಮುಂಬೈ ಕರ್ನಾಟಕ ಸಂಘದ ಡಾ.ಭರತ್ ಕುಮಾರ್ ಪೊಲಿಪು ನಿರ್ದೇಶನದ ‘ಒರಿ ಮಾಸ್ಟ್ರೆನ ಕತೆ’ ತುಳು ನಾಟಕ ಪ್ರದರ್ಶನಗೊಂಡಿತು.

No comments:

Post a Comment