Monday 19 March 2012

ನಾಟಕಕಾರ ಪ್ರಸನ್ನರಿಗೆ ‘ಮುದ್ರಾಡಿ ನಾಟ್ಕ ಸಂಮಾನ’




 ಮುದ್ರಾಡಿ ನಮ ತುಳುವೆರ್ ಕಲಾ ಸಂಘಟನೆಯು ಬೆಳ್ಳಿಹಬ್ಬದ ನೆನಪಿನಲ್ಲಿ ಆರಂಭಿಸಿದ ‘ಮುದ್ರಾಡಿ ನಾಟ್ಕ ಸಂಮಾನ’ ರಾಷ್ಟ್ರೀಯ ಪ್ರಶಸ್ತಿಯನ್ನು ಈ ಸಾಲಿನಲ್ಲಿ ಹಿರಿಯ ಚಿಂತಕ, ನಿರ್ದೇಶಕ, ನಾಟಕಕಾರ ಪ್ರಸನ್ನ ರಿಗೆ ನೀಡಲಾಗುವುದು ಎಂದು ಸಂಘಟನೆಯ ಅಧ್ಯಕ್ಷ ಸುಕುಮಾರ್ ಮೋಹನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಪ್ರಶಸ್ತಿಯು 25ಸಾವಿರ ರೂ. ನಗದು, ಪ್ರಶಸ್ತಿ ಫಲಕವನ್ನು ಹೊಂದಿದೆ. ಮಾ.25ರಂದು ಸಂಜೆ 4ಗಂಟೆಗೆ ಮುದ್ರಾಡಿಯ ಬಿ.ವಿ.ಕಾಂರತ ಬಯಲು ರಂಗಸ್ಥಳದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದರು.ಕಸಾಪ ನಿಕಟಪೂರ್ವ ಜಿಲ್ಲಾಧ್ಯಕ್ಷ ಅಂಬಾತನಯ ಮುದ್ರಾಡಿ ಪ್ರಶಸ್ತಿ ಪ್ರದಾನ ಮಾಡಲಿರುವರು. ಅಧ್ಯಕ್ಷತೆಯನ್ನು ಕಾರ್ಕಳ ಶಾಸಕ ಗೋಪಾಲ ಭಂಡಾರಿ ವಹಿಸಲಿರುವರು. ಮುಂಬೈ ಉದ್ಯಮಿ ದಿವಾಕರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಧರ್ಮಯೋಗಿ ಮೋಹನ್ ಆಶೀರ್ವದಿಸಲಿದ್ದಾರೆ. ಸಂಮಾನಕ್ಕೆ ಮೊದಲು ‘ಪ್ರಸನ್ನರೊಂದಿಗೆ ಮಾತುಕತೆ’ ರಂಗಸಂವಾದ ನಡೆ ಯಲಿದ್ದು, ಕಾರ್ಯಕ್ರಮದ ನಂತರ ಮಂಗಳೂರು ಸುವರ್ಣ ಪ್ರತಿಷ್ಠಾನದ ಕಲಾವಿದರಿಂದ ಸದಾನಂದ ಸುವರ್ಣ ನಿರ್ದೇಶಿಸಿದ ‘ಉರುಳು’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಸುಧೀಂದ್ರ ಮೋಹನ್, ಸಂತೋಷ್ ಶೆಟ್ಟಿ ಹಿರಿಯಡಕ, ಉಮೇಶ್ ಕಲ್ಮಾಡಿ, ಸುಧಾಕರ ಆಚಾರ್ಯ ಉಪಸ್ಥಿತರಿದ್ದರು.

No comments:

Post a Comment