ಮುದ್ರಾಡಿಯ ನಮ ತುಳುವೆರ್ ಕಲಾ ಸಂಘಟನೆ (ರಿ) ತನ್ನ ೨೬ನೇ ವರ್ಷದ ಸಂಭ್ರಮಾಚರಣೆಯಲ್ಲಿ ಖ್ಯಾತ ರಂಗಚಿಂತಕ ಲಿಂಗದೇವರು ಹಳೆಮನೆಯವರ ಸ್ಮರಣಾರ್ಥ ೧೧ನೇ ವರ್ಷದ ನವರಂಗೋತ್ಸವವನ್ನು ೨೦೧೧ರ ಸೆಪ್ಟೆಂಬರ್ ೨೮ರಿಂದ ಅಕ್ಟೋಬರ್ ೦೬ರವರೆಗೆ ಪ್ರತಿದಿನ ರಾತ್ರಿ ೭ ಘಂಟೆಗೆ ಬಿ. ವಿ. ಕಾರಂತ ಬಯಲು ರಂಗಸ್ಥಳದಲ್ಲಿ ನಡೆಸಲಿದೆ.
ಖ್ಯಾತ ಕಿರುತೆರೆ ಧಾರವಾಹಿಗಳ ನಿರ್ದೇಶಕರಾದ ಶ್ರೀ ವಿನು ಬಳಂಜರವರು ನವರಂಗೋತ್ಸವವನ್ನು ಉದ್ಘಾಟಿಸಲಿದ್ದಾರೆ, ಅಧ್ಯಕ್ಷತೆಯನ್ನು ಕಾರ್ಕಳ ಕ್ಷೇತ್ರದ ಶಾಸಕರಾದ ಶ್ರೀ ಗೋಪಾಲ ಭಂಡಾರಿಯವರು ವಹಿಸಲಿದ್ದಾರೆ, ಮುಖ್ಯ ಅಥಿತಿಯಾಗಿ ಬೆಂಗಳೂರಿನ, ಕರ್ನಾಟಕ ರಂಗಪರಿಷತ್ತಿನ ಅಧ್ಯಕ್ಷರಾದ ವಿಟ್ಠಲ ಕೊಪ್ಪದರವರು ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭದ ಅಧ್ಯಕ್ಷರಾಗಿ ಮಣಿಪಾಲದ ಡಾ|| ಹೆಚ್. ಶಾಂತಾರಾಮ್ ರವರು, ಮುಖ್ಯ ಅಥಿತಿಗಳಾಗಿ ದಿವಾಕರ್.ಎನ್. ಶೆಟ್ಟಿ, ಪ್ರಮೋದ್ ಮಧ್ವರಾಜ್ ಹಾಗು ಡಾ|| ರಾಜಾರಾಮ್ ರವರು ಭಾಗವಹಿಸಲಿದ್ದಾರೆ.
ರಾಜ್ಯದ ಹಲವೆಡೆಗಳಿಂದ ವಿವಿಧ ತಂಡಗಳು ನಿತ್ಯವೂ ತಮ್ಮ ನಾಟಕಗಳನ್ನು ಪ್ರದರ್ಶಿಸಲಿವೆ.


